ಯುವತಿ ಕೊಲೆ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

Prasthutha|

ದಾವಣಗೆರೆ: ಮದುವೆ ನಿಶ್ಚಿತಾರ್ಥ ಬೇರೆ ಯುವಕನೊಂದಿಗೆ ಆಗಿದೆ ಎಂಬ ಕಾರಣಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಮೃತಪಟ್ಟಿದ್ದಾನೆ.

- Advertisement -


ಗುರುವಾರ ದಾವಣಗೆರೆ ನಗರದ ಪಿಜೆ ಬಡಾವಣೆಯ ಚರ್ಚ್ ಎದುರಿಗೆ ಸಾದತ್(29) ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವತಿ ಚಾಂದ್ ಸುಲ್ತಾನಾ (24)ಳನ್ನು ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದನು. ಈ ವಿಚಾರ ತಿಳಿದ ಪೊಲೀಸರು ಆರೋಪಿ ಸಾದತ್ನ ಪ್ರಾಣ ಉಳಿಸಲು ದಾವಣಗೆರೆ ಸಿಟಿ ಸೆಂಟ್ರಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆರೋಪಿ ಸಾದತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.



Join Whatsapp