ಕಳಸಾ ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ: ಸಿ ಎಂ ಬೊಮ್ಮಾಯಿ

Prasthutha|

ಬೆಳಗಾವಿ:ಕಳಸಾ ಬಂಡೂರಿ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ್ದು, ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -


ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳುತ್ತೇವೆ. ನಾವೇ ಅಡಿಗಲ್ಲು ಹಾಕಿ ಈ ಭಾಗದ ಜನರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.



Join Whatsapp