ಮುಸ್ಲಿಮರ ಭಾವನೆ ಕೆರಳಿಸಲು ಬೈರಿದೇವರಕೊಪ್ಪದ ದರ್ಗಾ ತೆರವು: ಸಿದ್ದರಾಮಯ್ಯ

Prasthutha|

ಹುಬ್ಬಳ್ಳಿ: ಮುಸ್ಲಿಮರ ಭಾವನೆ ಕೆರಳಿಸಲು ಬೈರಿದೇವರಕೊಪ್ಪದ ದರ್ಗಾ ಮತ್ತು ಮಸೀದಿಯನ್ನು ತೆರವು ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಏರ್ಪಡಿಸಿರುವ ಮಹದಾಯಿ ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಬೈರಿದೇವರಕೊಪ್ಪದಲ್ಲಿ ಇತ್ತೀಚೆಗೆ ದರ್ಗಾ ತೆರವು ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಸ್ಲಿಮ್ ಸಮುದಾಯಕ್ಕೆ ದೌರ್ಜನ್ಯ ಎಸಗಬೇಕು ಎಂಬ ದುರುದ್ದೇಶದಿಂದ ಬೈರಿದೇವರಕೊಪ್ಪದ ದರ್ಗಾ ಮತ್ತು ಮಸೀದಿಯನ್ನು ತೆರವು ಮಾಡಲಾಗಿದೆ. ಅವುಗಳ ತೆರವು ಮಾಡಲು ಅದರ ಆಡಳಿತ ಮಂಡಳಿಗೆ ಸರ್ಕಾರ ಕಾಲಾವಕಾಶ ನೀಡಿದ್ದರೆ, ಕೆಲವು ಸಾಮಗ್ರಿಗಳನ್ನಾದರೂ ರಕ್ಷಿಸಿಕೊಳ್ಳುತ್ತಿದ್ದರು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ತೆರವು ಮಾಡಲಾಗಿದೆ. ಕಾಲಾವಕಾಶ ನೀಡಿದ್ದರೆ ನ್ಯಾಯಾಂಗ ನಿಂದನೆ ಆಗುತ್ತಿತ್ತೆ’ ಎಂದು ಪ್ರಶ್ನಿಸಿದರು.

- Advertisement -

‘ಇದು ಅತ್ಯಂತ ಹಳೆಯ ದರ್ಗಾವಾಗಿತ್ತು. ಹಿಂದೂ, ಮುಸ್ಲಿಂ ಸಮಾಜದವರು ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಯಾವುದೇ ಕಾರಣಕ್ಕೂ ತೆರವು ಮಾಡಬೇಡಿ ಎಂದು ಬೊಮ್ಮಾಯಿ ಅವರಲ್ಲಿ ನಾನು ಕೂಡ ವಿನಂತಿಸಿದ್ದೆ. ಆದರೂ ರಾತ್ರೋರಾತ್ರಿ ಪೊಲೀಸ್ ಭದ್ರತೆಯಲ್ಲಿ ಬಂದು ತೆರವು ಮಾಡಿದ್ದಾರೆ. ಇದು ಮುಸ್ಲಿಮ್ ಸಮುದಾಯಕ್ಕೆ ಮಾಡಿರುವ ದೊಡ್ಡ ಅನ್ಯಾಯ. ಇದು ಖಂಡನೀಯ’ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.



Join Whatsapp