ಬಂಟ್ವಾಳ | ರಸ್ತೆ ಅಪಘಾತ: ಬೈಕ್ ಸವಾರನನ್ನು ಬಲಿ ತೆಗೆದುಕೊಂಡ ಬಿಜೆಪಿ ಪ್ರಚಾರ ವಾಹನ

Prasthutha|

ಬಂಟ್ವಾಳ: ಬೈಕ್ ಹಾಗೂ ಬಿಜೆಪಿ ಪ್ರಚಾರದ ವಾಹನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.

- Advertisement -


ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ.


ಜ.14 ರಂದು ಆರಂಭವಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದ ಗ್ರಾಮ ವಿಕಾಸ ಯಾತ್ರೆಯ ಪ್ರಚಾರದ ವಾಹನ ಬೈಕ್’ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು ಎಂದು ತಿಳಿದು ಬಂದಿದೆ.



Join Whatsapp