ಕೊಡಗು: ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

Prasthutha|

ಮಡಿಕೇರಿ: ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ನಡೆದಿದೆ.

- Advertisement -


ಸೋಮವಾರಪೇಟೆ ತೋಳೂರು ಶೆಟ್ಟಳ್ಳಿಯ ನಿವಾಸಿ ಧರಣ್ (22) ಮೃತ ಯುವಕ ಎಂದು ಗುರುತಿಸಲಾಗಿದೆ.


ಧರಣ್ ಆಲೂರು ಸಿದ್ದಾಪುರದಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಮಧ್ಯಾಹ್ನ ಸ್ನಾನಕ್ಕೆಂದು ನದಿಗೆ ಇಳಿದಿದ್ದಾನೆ. ಈ ಸಂದರ್ಭ ಆತ ನೀರುಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.



Join Whatsapp