ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾಗ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ: ಹೆಚ್’ಡಿಕೆ

Prasthutha|

ರಾಯಚೂರು: ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾಗ, ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಹಾಸನದ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಭವಾನಿ ರೇವಣ್ಣ ಹೇಳಿಕೆ ನೀಡಿದ್ದರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದ್ದೇವೆ. ನಾಲ್ಕು-ಐದು ಜನ ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ. ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾಗ, ನಾವು ಕುಟುಂಬದಿಂದ ಯಾರನ್ನು ಸ್ಪರ್ಧೆಗೆ ಇಳಿಸಲ್ಲ. ಕೆಲವರಿಗೆ ವೈಯಕ್ತಿಕ ಪ್ರೀತಿ ವಿಶ್ವಾಸವಿರುತ್ತೆ. ಹಾಗಾಗಿ, ಅಭಿಮಾನದಿಂದ ಮಾತನಾಡಿದ್ದಾರೆ. ಅಭಿಮಾನದಿಂದ ಮಾತನಾಡಿದ್ದು ಎಲ್ಲಾ ಅಭಿಪ್ರಾಯವೆಂದು ತೀರ್ಮಾನಿಸಲು ಆಗಲ್ಲ. ಇನ್ನುಳಿದಿದ್ದು ಮನೆಯಲ್ಲಿ ಕುಳಿತು ಮತ್ತು ಪಕ್ಷದ ಚೌಕಟ್ಟಿನಲ್ಲಿ ಕುಳಿತು ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.



Join Whatsapp