ಆಕ್ಸಿಜನ್ ಕೊಡದೇ 36 ಜನರನ್ನು ಕೊಲೆ ಮಾಡಿದ್ದಾರೆ: ಸುಧಾಕರ್ ವಿರುದ್ಧ ಡಿಕೆಶಿ ಗಂಭೀರ ಆರೋಪ

Prasthutha|

ಚಾಮರಾಜನಗರ: ಕೋವಿಡ್ ಸಮಯದಲ್ಲಿ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಇದಕ್ಕೆ ಸಚಿವ ಕೆ. ಸುಧಾಕರ್ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಪ್ರಜಾಧ್ವನಿ ಯಾತ್ರೆ ಭಾಗವಾಗಿ ಚಾಮರಾಜನಗರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. 3 ಜನ ಮಾತ್ರ ಮೃತಪಟ್ಟಿದ್ದಾಗಿ, ಆ ಮಂತ್ರಿ ಹೇಳಿದ್ದ. ನಾವೆಲ್ಲ ಬಂದು ಮೃತರ ಕುಟುಂಬಸ್ಥರನ್ನು ಭೇಟಿಯಾದೆವು. ಸಿದ್ದರಾಮಯ್ಯ ಅವರು ಕೇಳಿದಾಗ ಅಧಿಕಾರಿಗಳು 36 ಜನ ಸತ್ತಿರುವುದನ್ನ ದೃಢಪಡಿಸಿದರು. ಆದರೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ಆಗಲೇ ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಅಂತ ಗೊತ್ತಾಯಿತು. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.



Join Whatsapp