ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

Prasthutha|

ಸಿಂದಗಿ: ಶಿಕ್ಷಕರೊಬ್ಬರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(ಫೆಬ್ರವರಿ 12) ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.

- Advertisement -

ಆತ್ಮಹತ್ಯೆ ಮಾಡಿಕೊಂಡವರನ್ನು ಸಿಂದಗಿ ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ ಎಂದು ಗುರುತಿಸಲಾಗಿದೆ. ಅವರು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿಕ್ಷಕ ಬಸವರಾಜ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಸಿಂದಗಿ ಪೊಲೀಸರು ಪರಿಶೀಲನೆ ಮಾಡಿ ತನಿಖೆ ನಡೆಸಿದ್ದಾರೆ.



Join Whatsapp