ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಹಿಂಸೆಗೆ ಪ್ರಚೋದಿಸುವವರ ವಿರುದ್ಧ ಹೈಕೋರ್ಟ್ ಸುಮೋಟೋ ಕ್ರಮ ಜರುಗಿಸಬೇಕು: ಅಬ್ದುಲ್ ಮಜೀದ್ ಒತ್ತಾಯ

Prasthutha|

ಬೆಂಗಳೂರು: ದಿನನಿತ್ಯ ಬಿಜೆಪಿ ನಾಯಕರು ನರಮೇಧ, ಕೊಲೆಗೆ ಪ್ರಚೋದನೆ ನೀಡುತ್ತಿದ್ದಾರೆ. ಕೋಮುವಾದಿ ಬಿ.ಎಸ್.ಬೊಮ್ಮಾಯಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇಂತಹ ಶಾಂತಿ ಕದಡುವ, ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳ ವಿರುದ್ಧ ಹೈಕೋರ್ಟ್ ಸುಮೋಟೋ ಕ್ರಮ ಜರುಗಿಸಬೇಕು ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಚಿವ ಅಶ್ವಥ್ ನಾರಾಯಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿರುವ ಹೇಳಿಕೆಯನ್ನು ಪ್ರಸ್ತಾಪಿಸಿ,ದಿನ ನಿತ್ಯ ಬಿಜೆಪಿ ನಾಯಕರು, ನರಮೇಧ, ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ನ್ಯಾಯಾಲಯ ತಕ್ಷಣ ಮಧ್ಯಪ್ರವೇಶಿಸಿ ಸುಮೋಟೋ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಹಿರಂಗವಾಗಿ ಹೊಡೆದು ಹಾಕಬೇಕು ಎಂದು ಕೊಲೆಗೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣರವರನ್ನು ತಕ್ಷಣವೇ ಕೊಲೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.



Join Whatsapp