ಗ್ರಾಮ ಲೆಕ್ಕಾಧಿಕಾರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Prasthutha|

ಮೈಸೂರು: ಮಹಿಳಾ ಗ್ರಾಮ ಲೆಕ್ಕಾಧಿಕಾರಿ (Village Accountant) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

- Advertisement -

ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿ ವಲಯದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಾಬಾಯಿ ತುಕಾರಾಂ ಪಡ್ಕೆ (25) ಮೃತಪಟ್ಟವರು.

ಕೃಷ್ಣಾಬಾಯಿ ತುಕಾರಾಂ ಪಡ್ಕೆ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಎಸ್‌ಗಳ್ಳಿ ಗ್ರಾಮದವರು. ಕೃಷ್ಣಾಬಾಯಿ 1 ತಿಂಗಳ ಹಿಂದೆಯಷ್ಟೆ ಬೆಳಗಾವಿಯ ಸುಬಾಸ್ ಬೋಸ್ಲೆಯವರನ್ನು ವಿವಾಹವಾಗಿದ್ದರು. ಸುಬಾಸ್ ಬೋಸ್ಲೆ ಹನೂರಿನ ಅರಣ್ಯ ಇಲಾಖೆಯ ಫಾರೆಸ್ಟ್ ಗಾರ್ಡ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

- Advertisement -

ಇನ್ನು ಕೃಷ್ಣಾಬಾಯಿ 4 ದಿನಗಳ ಹಿಂದೆಯಷ್ಟೆ ಕರ್ತವ್ಯಕ್ಕೆ ಹಾಜರಾಗಿದ್ದು, ಸಹೋದ್ಯೋಗಿ ಗ್ರಾಮ ಲೆಕ್ಕಾಧಿಕಾರಿ ಚೈತ್ರ ಮತ್ತು ಅವರ ತಾಯಿಯೊಂದಿಗೆ ಬಿಳಿಕೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.



Join Whatsapp