ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

Prasthutha|


ಮಂಗಳೂರು: 8 ಪ್ರಕರಣಗಳಲ್ಲಿ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದ್ದರೂ ತಲೆಮರೆಸಿಕೊಂಡಿದ್ದ ಬೆಂಗ್ರೆ ಕಬೀರ್ ಮಂಜಿಲ್ ನಿವಾಸಿ ಕಬೀರ್ (30) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -


ಈತನ ವಿರುದ್ಧ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಕಂಕನಾಡಿ, ಬಜಪೆ, ಉಪ್ಪಿನಂಗಡಿ ಪೊಲೀಸ್ ಠಾಣೆಗಳು ಸೇರಿದಂತೆ ಒಟ್ಟು 8 ಪ್ರಕರಣಗಳಲ್ಲಿ ಈತನ ವಿರುದ್ಧ ಎಫ್’ಐಆರ್ ದಾಖಲಾಗಿದ್ದು, 8 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಕಬೀರ್


ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಎರಡು ಬಾರಿ ವಾರೆಂಟ್ ಬಂದಿದ್ದರೂ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -


ಕೃಷ್ಣಾಪುರ ಚೊಕ್ಕಬೆಟ್ಟು 8ನೆ ಬ್ಲಾಕ್ ರೇಷ್ಮಾ ಮಂಜಿಲ್ ನಿವಾಸಿ ನಿಸಾರ್ ಹುಸೈನ್ ಬಂಧಿತ ಆರೋಪಿ. ಈತನ ವಿರುದ್ಧ ಸುರತ್ಕಲ್, ಪುತ್ತೂರು, ಮುಲ್ಕಿ, ಬರ್ಕೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ನಿಸಾರ್ ಹುಸೈನ್


Join Whatsapp