ಕೋಲಾರದಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಧರಣಿ

Prasthutha|

ಬೆಂಗಳೂರು: 2023ನೇ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಗಳೂರು ನಿವಾಸದ ಎದುರು ಅಭಿಮಾನಿಗಳು ಮಂಗಳವಾರ ಧರಣಿ ನಡೆಸಿದರು.

- Advertisement -


ಸಿದ್ದರಾಮಯ್ಯ ನಿವಾಸದ ಮುಂದೆ ಕಾರ್ಯಕರ್ತರು ಜಮಾಯಿಸಿದ್ದು, ಶರ್ಟ್ ಬಿಚ್ಚಿ ಬಾರುಕೋಲಿನಿಂದ ಅಭಿಮಾನಿ ಹೊಡೆದುಕೊಂಡು ತಮ್ಮ ಬೆಂಬಲವನ್ನು ಸೂಚಿಸಿದರು.


ಸಮೀಕ್ಷಾ ತಂಡಗಳ ಮಾಹಿತಿಯನ್ನು ಸಂಗ್ರಹಿಸಿಕೊoಡ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಕೋಲಾರಕ್ಕಿಂತ ವರಣಾ ಕ್ಷೇತ್ರವೇ ಸೇಫ್ ಎನ್ನುವ ಸೂಚನೆಯನ್ನು ನೀಡಿತ್ತು ಎನ್ನಲಾಗಿದೆ.
ಇಲ್ಲಿನ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿ ಕೋಲಾರದ ಸಿದ್ದರಾಮಯ್ಯ ಅಭಿಮಾನಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಸಿದ್ದು ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ.



Join Whatsapp