ನಿಖಿಲ್ ಕುಮಾರಸ್ವಾಮಿ ಸೋಲು: ಇಕ್ಬಾಲ್ ಹುಸೇನ್ ಗೆಲುವು

Prasthutha|

ಜೆಡಿಎಸ್ ಭದ್ರಕೋಟೆ ಎಂದು ಕರೆಯಲ್ಪಡುವ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಲ್ ಕುಮಾರಸ್ವಾಮಿ ಸೋಲನ್ನು ಕಂಡಿದ್ದಾರೆ.

- Advertisement -

ರಾಮನಗರದಲ್ಲಿ ಇದುವರೆಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬ ರಾಜಕೀಯವಾಗಿ ಬೇರೂರಿತ್ತು. ಹೀಗಾಗಿನೇ ರಾಮನಗರ ಕ್ಷೇತ್ರವನ್ನು ದೇವೇಗೌಡರ ಕುಟುಂಬದ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು. ಈ ಹಿಂದೆ ಗೌಡ್ರು ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಬಳಿಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಜಯಗಳಿಸಿದ್ದರು.

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ.



Join Whatsapp