ಗೆಲುವು ತಂದು ಕೊಟ್ಟ ಅಣ್ಣ ಡಿಕೆಶಿ ಸಿಎಂ ಆಗಬೇಕು: ಡಿ.ಕೆ ಸುರೇಶ್

Prasthutha|

- Advertisement -

ಬೆಂಗಳೂರು: ಕಾಂಗ್ರೆಸದ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದ ನನ್ನ ಅಣ್ಣ ಡಿ.ಕೆ ಶಿವಕುಮಾರ್ ಪಕ್ಷಕ್ಕಾಗಿ ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಹೀಗಾಗಿ ಅವರೇ ಸಿಎಂ ಆಗಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷ ಸಂಕಷ್ಟದಲ್ಲಿದ್ದಾಗ ಅಣ್ಣ ಡಿಕೆಶಿ ಹಿಂಜರಿಯದೇ ಪಕ್ಷ ಸಂಘಟನೆ ಮಾಡಿ ಬೆಳೆಸಿದ್ದಾರೆ ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿ ಸೋನಿಯಾ ಗಾಂಧಿಯವರಿಗೆ ಹಾಗೂ ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾತು ಕೊಟ್ಟಂತೆ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ನನ್ನ ನಿರೀಕ್ಷೆ ಪ್ರಕಾರ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು” ಎಂದು ಹೇಳಿದ್ದಾರೆ



Join Whatsapp