ಸಿಎಂ ಪ್ರಮಾಣವಚನ: ಕಂಠೀರವ ಸ್ಟೇಡಿಯಂ ಬಳಿ ಲಘು ಲಾಠಿ ಚಾರ್ಚ್

Prasthutha|

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ.

- Advertisement -

ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವ ಜನರು ಕಂಠೀರವ ಕ್ರೀಡಾಂಗಣದ ಒಳಗೆ ಹೋಗಲು ನೂಕುನುಗ್ಗಲು ಶುರುವಾಗಿದೆ. ಈ ವೇಳೆ ಪೊಲೀಸರು ಲಘುಲಾಠಿ ಚಾರ್ಜ್ ಮಾಡಿದ್ದು, ತಳ್ಳಾಟ ನೂಕಾಟದಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ನೂಕುನುಗ್ಗಲಾದ ಹಿನ್ನೆಲೆ ಸ್ಥಳಕ್ಕೆ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಆಗಮಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮತ್ತು ಸಾರ್ವಜನಿಕ ಪ್ರವೇಶ ದ್ವಾರ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ



Join Whatsapp