ರೈತರು ಪೊಲೀಸ್ ವಶಕ್ಕೆ | ರಾಜಭವನದತ್ತ ಕಾಂಗ್ರೆಸ್ ನಾಯಕರ ಯಾತ್ರೆ

Prasthutha|

ಬೆಂಗಳೂರು : ಕೇಂದ್ರ ಸರಕಾರದ ನೂತನ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ, ನಗರದಲ್ಲಿ ‘ರಾಜಭವನ ಚಲೋ’ ಹಮ್ಮಿಕೊಂಡಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ.

- Advertisement -

ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಮಾವೇಶದ ಬಳಿಕ ರಾಜಭವನದತ್ತ ತೆರಳಿದ ರೈತರಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ. ಪ್ರಮುಖ ನಾಯಕರು ತೆರೆದ ವಾಹನಗಳಲ್ಲಿ ಜಾಥಾ ತೆರಳಿದ್ದಾರೆ. ಆದರೆ, ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳ;ಲಾಗಿದೆ.      

Join Whatsapp