ಆರೆಸ್ಸೆಸ್ ಹಿರಿಯ ಮುಖಂಡ ಬಾಬುರಾವ್ ದೇಸಾಯಿ ನಿಧನ : ಸಿಎಂ ಯಡಿಯೂರಪ್ಪ, ಸಂಸದ ಜೋಷಿ ಸಂತಾಪ

Prasthutha|

ಬೆಂಗಳೂರು : ಆರೆಸ್ಸೆಸ್ ಹಿರಿಯ ಪ್ರಚಾರಕರಾಗಿದ್ದ ಬಾಬುರಾವ್ ದೇಸಾಯಿ (97) ಅವರು ನಿಧನರಾಗಿದ್ದಾರೆ. ವಿಶ್ವ ಹಿಂದೂ ಪರಿಷತ್ ನ ಹಿರಿಯ ಪ್ರಚಾರಕರೂ ಆಗಿದ್ದ ದೇಸಾಯಿಯವರು, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -

1942ರಲ್ಲಿ ಸಂಘ ಪರಿವಾರದ ಪ್ರಚಾರಕರಾಗಿ ಸೇರ್ಪಡೆಯಾಗಿದ್ದ ಬಾಬುರಾವ್ 1949ರಲ್ಲಿ ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡದ ಜಿಲ್ಲಾ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರ ಧಾರವಾಡ, ಕಲಬುರಗಿ, ಬಳ್ಳಾರಿ ವಿಭಾಗದ ಪ್ರಚಾರಕರಾಗಿ ಸೇವೆ ಸಲ್ಲಿಸಿ 1986ರಲ್ಲಿ ವಿಶ್ವ ಹಿಂದೂ ಪರಿಷತ್ ನ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.

ದೇಸಾಯಿ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಷಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Join Whatsapp