ಬಿಜೆಪಿ ನಾಯಕರು ಎಷ್ಟು ಬಾರಿ ಬಂದರೂ, ತಮಿಳುನಾಡಿನಲ್ಲಿ ಕಮಲ ಅರಳುವುದಿಲ್ಲ : ಕನಿಮೋಳಿ

Prasthutha|

ಚೆನ್ನೈ : ರಾಜ್ಯಕ್ಕೆ ಎಷ್ಟು ಬಾರಿ ಬಂದರೂ, ತಮಿಳುನಾಡಿನಲ್ಲಿ ಕಮಲ ಅರಳುವುದಿಲ್ಲ ಎಂದು ಡಿಎಂಕೆ ನಾಯಕಿ, ಸಂಸದೆ ಕನಿಮೋಳಿ ಹೇಳಿದ್ದಾರೆ.

- Advertisement -

ರಾಮನಾಥಪುರಂನಲ್ಲಿ ಪ್ರಚಾರ ಸಭೆಯೊಂದನ್ನುದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಎಷ್ಟು ಸಲ ಬೇಕಾದರೂ ರಾಜ್ಯಕ್ಕೆ ಬರಲಿ, ಇಲ್ಲಿ ಕಮಲ ಅರಳುವುದಿಲ್ಲ” ಎಂದರು.

ರಾಜ್ಯದಲ್ಲಿ 23 ಲಕ್ಷ ಮಂದಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ನೆರೆ ಹಾವಳಿಯಿಂದ ನಷ್ಟ ಅನುಭವಿಸಿದ ರೈತರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ. ಮಹಿಳೆಯರಿಗೆ ಸುರಕ್ಷತೆಯಿಲ್ಲ. ಎಐಎಡಿಎಂಕೆ ಸರಕಾರ ಕೋವಿಡ್ ಸಾಂಕ್ರಾಮಿಕದ ಸಂದರ್ಭ ಸಾಕಷ್ಟು ಭ್ರಷ್ಟಾಚಾರ ಎಸಗಿದೆ” ಎಂದು ಅವರು ಆಪಾದಿಸಿದರು.

- Advertisement -

ಸರಕಾರ ಬದಲಾಗಬೇಕು, ಡಿಎಂಕೆ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದಾಗಿ ಜನರು ಬಯಸುತ್ತಿದ್ದಾರೆ ಎಂದು ಅವರು ತಿಳಿಸಿದರು.

Join Whatsapp