ಕೆಸರುಗದ್ದೆಗೆ ಇಳಿದು ನಾಟಿ ಮಾಡಿ, ಟ್ರ್ಯಾಕ್ಟರ್ ಓಡಿಸಿದ ರಾಹುಲ್ ಗಾಂಧಿ

Prasthutha|

ಸೋನಿಪತ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹರಿಯಾಣದಲ್ಲಿ ಗದ್ದೆಗೆ ಇಳಿದು ರೈತರ ಜೊತೆ ಕೆಲ ಸಮಯ ಕಳೆದಿದ್ದಾರೆ. ಅಲ್ಲದೇ, ಭತ್ತದ ಕೃಷಿಯ ಬಗ್ಗೆ ರೈತರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡರು.

- Advertisement -


ದೆಹಲಿಯಿಂದ ಹಿಮಾಚಲ ಪ್ರದೇಶದ ಶಿಮ್ಲಾಗೆ ಹೊರಟಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹರಿಯಾಣದ ಸೋನಿಪತ್ ಜಿಲ್ಲೆಯ ಬರೋಡಾದ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ ಬೆರೆತರು. ಬರೋಡಾ ಮತ್ತು ಮದೀನಾದಲ್ಲಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರೊಂದಿಗೆ ನಾಟಿ ಕೆಲಸದಲ್ಲಿ ತೊಡಗಿಸಿಕೊಂಡರು.
ಟ್ರ್ಯಾಕ್ಟರ್ ಮೂಲಕ ಗದ್ದೆಯನ್ನು ಹದ ಮಾಡುತ್ತಿದ್ದ ರೈತನ ಜೊತೆಗೆ ಅವರೂ ಟ್ರ್ಯಾಕ್ಟರ್ ಚಲಾಯಿಸಿದರು.



Join Whatsapp