ದ.ಕ. ಜಿಲ್ಲೆಯಲ್ಲಿ ತಗ್ಗಿದ ಮಳೆ

Prasthutha|

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ರವಿವಾರ ಸಾಧಾರಣ ಮಳೆಯಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಬಿಟ್ಟು ಬಿಟ್ಟು ಮಳೆಯಾಗಿದೆ.

- Advertisement -

ಇನ್ನು 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು , ಪುಂಜಾಲಕಟ್ಟೆ, ಉಪ್ಪಿನಂಗಡಿ ಮೂಡುಬಿದಿರೆ ಸಹಿತ ಸಾಧಾರಣ ಮಳೆಯಾಗಿದೆ. ಕಡಬದಲ್ಲಿ ಎರಡು ಬಾರಿ ಉತ್ತಮ ಮಳೆಯಾಗಿದೆ. ಉಳಿದಂತೆ ಎಲ್ಲಾ ಕಡೆ ಮಳೆ ಕಡಿಮೆಯಾಗಿತ್ತು.



Join Whatsapp