ಪರೀಕ್ಷೆಯಲ್ಲಿ ನಕಲು: ಮಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಬೆಂಗಳೂರು: ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದು ಬಳಿಕ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -


ಗಿರಿನಗರ ನಿವಾಸಿ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.


ಆದಿತ್ಯ ಪ್ರಭು ಹೊಸಕೆರೆ ಹಳ್ಳಿ ಸಮೀಪದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಟೆಕ್ ನ ದ್ವಿತೀಯ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ. ಇನ್ನು ಸೋಮವಾರ ಪರೀಕ್ಷೆಯಿದ್ದು, ಈ ವೇಳೆ ಮೊಬೈಲ್ ಮೂಲಕ ನಕಲು ಮಾಡುತ್ತಿದ್ದ. ಅದನ್ನು ಗಮನಿಸಿದ ಶಿಕ್ಷಕರು ತಕ್ಷಣ ಆತನ ಪೋಷಕರಿಗೆ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅದರಿಂದ ಬೇಸರಗೊಂಡು 9ನೇ ಮಹಡಿಗೆ ಹೋಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp