ಗಾಳಿ ಮಳೆಗೆ ಧರಾಶಾಹಿಯಾದ ಬೃಹತ್ ಮರ: ಮಾಣಿ – ಕಬಕ ಹೆದ್ದಾರಿ ಬಂದ್

Prasthutha|

ಬಂಟ್ವಾಳ: ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

- Advertisement -


ಗಾಳಿ ಮಳೆಗೆ ಮರದ ಜೊತೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.


ಘಟನೆಯಿಂದಾಗಿ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಲು ಸಾಲುಗಟ್ಟಿ ನಿಂತಿದೆ. ಕೆಲವೊಂದು ವಾಹನಗಳು ಕೊಡಾಜೆ ವೀರಕಂಬ ಮೂಲಕ ಕಲ್ಲಡ್ಕ ತಲುಪಿ ಸಂಚಾರ ನಡೆಸಿದರೆ ಕೆಲವೊಂದು ವಾಹನಗಳು ಕಬಕ ವಿಟ್ಲ ಮೂಲಕ ಕಲ್ಲಡ್ಕ ತಲುಪಿ ಸಂಚಾರ ನಡೆಸಿವೆ. ವಿದ್ಯುತ್ ಇಲಾಖೆ, ಅರಣ್ಯ ಇಲಾಖೆ, ವಿಟ್ಲ ಠಾಣಾ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಸ್ಥಳೀಯರೊಂದಿಗೆ ಸೇರಿಕೊಂಡು ತೆರವು ಕಾರ್ಯಾಚರಣೆ ನಡೆಸುತ್ತಿದೆ.



Join Whatsapp