ಗ್ರಾ.ಪಂ. ಉಪಚುನಾವಣೆ; ಆರ್ಯಾಪಿನಲ್ಲಿ ಪುತ್ತಿಲ ಪರಿವಾರ, ನಿಡ್ಪಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು: ಬಿಜೆಪಿಗೆ ಮುಖಭಂಗ

Prasthutha|


ಪುತ್ತೂರು:ಆರ್ಯಾಪು ಗ್ರಾ.ಪಂ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ವಾರ್ಡ್ 1ಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಸತೀಶ್ ಶೆಟ್ಟಿ ಜಯಗಳಿಸಿದ್ದಾರೆ.

- Advertisement -


ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353 ಮತ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 140 ಮತಗಳನ್ನು ಪಡೆದುಕೊಂಡಿದ್ದಾರೆ.

ವಾರ್ಡ್-1ರ ಸಾಮಾನ್ಯ ಮೀಸಲು ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯ ಮುರಳಿಕೃಷ್ಣ ಭಟ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ಉಪ ಚುನಾವಣೆಯಲ್ಲಿ ನಡೆದಿತ್ತು. ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರ್ 208 ಮತ, ಕಾಂಗ್ರೆಸ್ ಬೆಂಬಲಿತ ಸತೀಶ್ ಶೆಟ್ಟಿ 235 ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು 85 ಮತಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಡೆದಿದ್ದ ಸ್ಥಾನವನ್ನು ಈ ಭಾರಿ ಕಾಂಗ್ರೆಸ್ ಕಸಿದುಕೊಂಡಿದೆ.



Join Whatsapp