ಹಣ, ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದ ಆರೋಪ: ರೇವಣ್ಣಗೆ ಸಮನ್ಸ್ ಜಾರಿ

Prasthutha|

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

- Advertisement -


ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ ಅವರು ಚುನಾವಣೆ ಅಕ್ರಮದಿಂದ ಶಾಸಕರಾಗಿದ್ದು, ಅವರನ್ನು ಅನರ್ಹಗೊಳಿಸಿ ಮೂರನೇ ಸ್ಥಾನದಲ್ಲಿರುವ ತನ್ನನ್ನು ಶಾಸಕ ಎಂದು ಘೋಷಿಸುವಂತೆ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.



Join Whatsapp