ಮುಸ್ಲಿಮ್ ಮತಗಳಿಂದ ಜೆಡಿಎಸ್’ಗೆ ಸೋಲಾಗಿಲ್ಲ: ಸಿಎಂ ಇಬ್ರಾಹಿಂ

Prasthutha|

‘ಈಗ ಜನ ಕಾಂಗ್ರೆಸ್ ಗೆ ಮತ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದಾರೆ’

- Advertisement -


ಬೆಂಗಳೂರು: ಈ ಬಾರಿ ವಿಧಾನಸಭೆಯಲ್ಲಿ ಜೆಡಿಎಸ್ ಗೆ ಸೋಲು ಆಗಿದ್ದು ಮುಸ್ಲಿಂ ಮತಗಳಿಂದ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಹಳ್ಳಿಗಾಡಿನ ಜನ ಜೆಡಿಎಸ್ ಬಿಟ್ಟು ಹೋದರು. ಕಳೆದ ಬಾರಿ 38 ಸೀಟು ಬಂದಿದ್ದಾಗ ಒಂದು ಮುಸ್ಲಿಂ ವೋಟ್ ಬಂದಿರಲಿಲ್ಲ. ಈಗ 13% ಮುಸ್ಲಿಂ ವೋಟ್ ಬಂದಿದ್ದರು 19 ಸೀಟು ಮಾತ್ರ ಬಂದಿದೆ. ಹಾಗಾದರೆ 20 ಸೀಟು ಯಾವುವು? ಯಾವ ವೋಟ್ ಜೆಡಿಎಸ್ ಬಿಟ್ಟು ಹೋಯ್ತು? ಇದರ ಬಗ್ಗೆ ಚರ್ಚೆ ಆಗಬೇಕು ಎಂದರು.

- Advertisement -


ಈಗ ಜನ ಕಾಂಗ್ರೆಸ್ ಗೆ ಮತ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದಾರೆ. ಡಿಕೆ ಶಿವಕುಮಾರ್ ನೋಡಿ ಮತ ಕೊಟ್ಟರು. ಈಗ ನಂಬಿಕೆ ದ್ರೋಹ ಆಗಿದೆ ಎಂದು ಹೇಳುತ್ತಿದ್ದಾರೆ.
ಕಾಂಗ್ರೆಸ್ ಅವರಿಗೇ ಗೊತ್ತಿರಲಿಲ್ಲ ಇಷ್ಟು ಮತ ಬರುತ್ತೆ ಅಂತ. ಬಿಜೆಪಿ ಕಾಂಗ್ರೆಸ್ ವಿರುದ್ಧ ಹೋರಾಡದೇ ನಮ್ಮ ವಿರುದ್ಧ ಹೋರಾಡಿದರು. ಅದು ಸಮಸ್ಯೆ ಆಯ್ತು. 27 ಕಡೆ ಮೋದಿ ಹೋದರು. ಜೆಡಿಎಸ್ ಬಲ ಇರೋ ಕಡೆ ಮೋದಿ ಹೋಗಿ ಅವರ ತಲೆ ಮೇಲೆ ಅವರೇ ಕಲ್ಲು ಹಾಕಿಕೊಂಡರು. ಈಗ ನಮ್ಮನ್ನು ದೂರಿದ್ರೆ ಪ್ರಯೋಜನ ಏನು? ಎಂದು ಬಿಜೆಪಿ ವಿರುದ್ಧವೂ ಆಕ್ರೋಶ ಹೊರ ಹಾಕಿದರು



Join Whatsapp