ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಆರಗ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಿ: ಕಾಂಗ್ರೆಸ್

Prasthutha|

ಬೆಂಗಳೂರು: ಬಿಸಿಲುನಾಡಿನ ಶ್ರಮಜೀವಿಗಳು ಕಪ್ಪು ಬಣ್ಣದಲ್ಲಿರುವುದು ಭ್ರಷ್ಟಾಚಾರದ ಹಣದಿಂದ ಎಸಿ ಮನೆಯಲ್ಲಿರುವ ಬಿಜೆಪಿಗರಿಗೆ ನೋಡಲಾಗುತ್ತಿಲ್ಲವೇ? ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಆರಗ ಜ್ಞಾನೇಂದ್ರ ಅವರನ್ನು ಉಚ್ಚಾಟನೆ ಮಾಡಬೇಕು, ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ, ಉತ್ತರ ಕರ್ನಾಟಕದ ಜನ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು,  ‘ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ’ ಎಂದು ಹೇಳಿದೆ.

ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮಾತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ. ಆದರೆ, ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ’ ಎಂದು ಹೇಳಿದೆ.



Join Whatsapp