ಕರ್ನಾಟಕದಲ್ಲಿ ಹೆಚ್’ಡಿಕೆ, ಬೊಮ್ಮಾಯಿ ಇಬ್ಬರೇ ಸತ್ಯಹರಿಶ್ಚಂದ್ರರು: ಹೆಚ್.ವಿಶ್ವನಾಥ್ ವ್ಯಂಗ್ಯ

Prasthutha|

ಬೆಂಗಳೂರು: ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರಿದ್ದಾರೆ. ಒಬ್ಬರು ಹೆಚ್.ಡಿ ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

- Advertisement -


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು. ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಅವರು ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬಾರದು. ಕುಮಾರಸ್ವಾಮಿಯವರೇ ಈಗ ಆ ಪೆನ್ಡ್ರೈವ್ ಏನಾಯ್ತು ಎಂದು ಪ್ರಶ್ನಿಸಿದ್ದಾರೆ.


ಕುಮಾರಸ್ವಾಮಿಯವರು ಸುಮ್ಮನೆ ಏನೇನೋ ಆರೋಪ ಮಾಡುತ್ತಾರೆ. ಆದರೆ ಯಾವುದನ್ನು ಸಾಬೀತು ಮಾಡಿದ್ದಾರೆ? ಅವರು ಸಹ ಮುಖ್ಯಮಂತ್ರಿ ಆಗಿದ್ದವರು. ಅವರು ಆಡುವ ಮಾತಿನಿಂದ ಅವರದ್ದೇ ಘನತೆ ಕಡಿಮೆ ಆಗುತ್ತಿದೆ ಎಂದರು.



Join Whatsapp