ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

Prasthutha|

- Advertisement -

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಗುರಿ ಇದೆ. ಈಗಾಗಲೇ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂದು ನಿರ್ಧಾರ ಆಗಿದೆ. 20 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು. ಇದಕ್ಕೆ ಕೆಲಸ ಮಾಡುತ್ತೇವೆ ಎಂದರು.



Join Whatsapp