ರೈತ ಕ್ರಾಂತಿ | ನಾಳೆ ಸಂಜೆ 5 ಗಂಟೆ ವರೆಗೆ ಹರ್ಯಾಣದಲ್ಲಿ ಇಂಟರ್ನೆಟ್ ಬಂದ್

Prasthutha|

ನವದೆಹಲಿ : ದೆಹಲಿ ಗಡಿ ಭಾಗಗಳಲ್ಲಿ ರೈತ ಹೋರಾಟ ಗಂಟೆಗಂಟೆಗೂ ತೀವ್ರಗೊಳ್ಳುತ್ತಿರುವ ನಡುವೆ, ಹರ್ಯಾಣದ ಬಿಜೆಪಿ ಸರಕಾರ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದೆ.

- Advertisement -

ನಾಳೆ ಸಂಜೆ 5 ಗಂಟೆ ವರೆಗೆ ಹರ್ಯಾಣದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಸುಮಾರು 14 ರಾಜ್ಯಗಳಲ್ಲಿ ಇದರಿಂದ ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವರದಿಗಳಾಗಿವೆ.  

ರೈತ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಮುಖ್ಯವಾಹಿನಿ ಮಾಧ್ಯಮಗಳು ಬಿಜೆಪಿ ಸರಕಾರದ ಪರವಾಗಿ ರೈತ ಹೋರಾಟದ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಅಪಪ್ರಚಾರದಲ್ಲಿ ತೊಡಗಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನಾ ಸ್ಥಳದಿಂದ ಸತ್ಯ ಸುದ್ದಿಗಳು ಹರಡುತ್ತಿರುವುದರಿಂದ ಅದನ್ನು ತಡೆಯಲು ಹರ್ಯಾಣದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎನ್ನಲಾಗುತ್ತಿದೆ.

Join Whatsapp