ಭಾರತವು ಚಂದ್ರನ ಮೇಲಿದೆ: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಹರ್ಷ

Prasthutha|

ಬೆಂಗಳೂರು: ಚಂದ್ರಯಾನ 3 ಲ್ಯಾಂಡರ್ ಮಾಡ್ಯೂಲ್‌ ವಿಕ್ರಮ್ ಚಂದ್ರನ ಮೇಲೆ ಸುರಕ್ಷಿತವಾಗಿ ಮತ್ತು ಮೃದುವಾಗಿ ಇಳಿದ ಸಂಭ್ರಮದಲ್ಲಿ ‘ಭಾರತವು ಚಂದ್ರನ ಮೇಲಿದೆ’ ಎಂದು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -

“ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಮ್ಮ ವೈಫಲ್ಯದಿಂದ ನಾವು ಬಹಳಷ್ಟು ಕಲಿತಿದ್ದೇವೆ ಮತ್ತು ಇಂದು ನಾವು ಯಶಸ್ವಿಯಾಗಿದ್ದೇವೆ. ಚಂದ್ರಯಾನ-3 ಗಾಗಿ ನಾವು ಇಂದಿನಿಂದ ಮುಂದಿನ 14 ದಿನಗಳನ್ನು ಎದುರು ನೋಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಿಂದ ಚಂದ್ರಯಾನ-3 ಯಶಸ್ಸಿನ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಎಸ್. ಸೋಮನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದರು. ನಿಮ್ಮ ಹೆಸರೇ ಸೋಮನಾಥ, ಅದರ ಅರ್ಥ ಚಂದ್ರ ಎಂದರು.

- Advertisement -

ಚಂದ್ರನ ದಕ್ಷಿಣ ಧ್ರುವದ ಬಳಿ ಹೋದ ಮೊದಲ ದೇಶ ಭಾರತ ಎಂದು ಚಂದ್ರಯಾನ 3 ಮಿಷನ್‌ನ ಯೋಜನಾ ನಿರ್ದೇಶಕ ಪಿ. ವೀರಮುತ್ತುವೆಲ್ ಸಂಭ್ರಮ ವ್ಯಕ್ತಪಡಿಸಿದರು.

“ನನಗೆ ಮತ್ತು ನನ್ನ ತಂಡಕ್ಕೆ ಇದು ಅತ್ಯಂತ ಸ್ಮರಣೀಯ ಕ್ಷಣವಾಗಿದೆ. ಕಳೆದ ಹಲವು ವರ್ಷಗಳಿಂದ ನಾವು ಶ್ರಮಿಸಿದ್ದೇವೆ. ನಾವು ನಮ್ಮ ಗುರಿಯನ್ನು ಸಾಧಿಸಿದ್ದೇವೆ” ಎಂದು ಚಂದ್ರಯಾನ 3 ಮಿಷನ್‌ನ ಸಹಾಯಕ ಯೋಜನಾ ನಿರ್ದೇಶಕಿ ಕಲ್ಪನಾ ಹೇಳಿದ್ದಾರೆ.

ಬೆಂಗಳೂರಿನ ಇಸ್ರೋ ಮಿಷನ್ ಕಂಟ್ರೋಲ್ ಸೆಂಟರ್ ನಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮೈಗೆ ಇಳಿಯುತ್ತಿದ್ದಂತೆ ಸಂಭ್ರಮಾಚರಣೆ ಆರಂಭವಾಯಿತು. ‘ವಂದೇ ಮಾತರಂ’ ಘೋಷಣೆಗಳಿಂದ ತುಂಬಿತ್ತು. ಎಲ್ಲರೂ ಗೆಲುವಿನ ಕೇಕೆ ಹಾಕಿದರು.



Join Whatsapp