ರೈತರ ಪ್ರತಿಭಟನಾ ಸ್ಥಳಕ್ಕೆ ಶಿವಸೇನೆ ಮುಖಂಡ ಸಂಜಯ್ ರಾವತ್ ಭೇಟಿ; ಹೋರಾಟಕ್ಕೆ ಮಹಾರಾಷ್ಟ್ರ ಸರಕಾರದ ಬೆಂಬಲ

Prasthutha|

ನವದೆಹಲಿ : ಕಳೆದ 70 ದಿನಗಳಿಂದ ದೆಹಲಿ ಗಡಿ ಭಾಗಗಳಲ್ಲಿ ಬಿಜೆಪಿ ಸರಕಾರದ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಇಂದು ಶಿವಸೇನಾ ನಾಯಕ ಸಂಜಯ್ ರಾವತ್ ಭೇಟಿ ಮಾಡಿದ್ದಾರೆ. ಈ ವೇಳೆ ಅವರು ರೈತ ನಾಯಕ ರಾಕೇಶ್ ಟಿಕಾಯತ್ ಅವರ ಜೊತೆ ಮಾತುಕತೆ ನಡೆಸಿದರು.

- Advertisement -

“ನಾವು ಇಲ್ಲಿಗೆ ರೈತರನ್ನು ಬೆಂಬಲಿಸಲು ಬಂದಿದ್ದೇವೆ. ಠಾಕ್ರೆ ಅವರು ರೈತರನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ಸರಕಾರ ಕೂಡ ಪ್ರತಿಭಟನೆಯನ್ನು ಬೆಂಬಲಿಸುತ್ತದೆ” ಎಂದು ಸಂಜಯ್ ರಾವತ್ ಹೇಳೀದ್ದಾರೆ, ಗಾಝಿಪುರ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಿರತರಾಗಿರುವ ರೈತರನ್ನು ರಾವತ್ ಭೇಟಿಯಾದರು.

ಈ ವೇಳೆ ಮಾತನಾಡಿರುವ ಬಿಕೆಯು ಅಧ್ಯಕ್ಷ ರಾಕೇಶ್ ಟಿಕಾಯತ್, ರೈತರನ್ನು ಬೆಂಬಲಿಸಲು ಸರಕಾರ ಮುಂದೆ ಬಂದರೆ ನಮ್ಮಲ್ಲೇನೂ ಸಮಸ್ಯೆಯಿಲ್ಲ. ಆದರೆ, ಈ ವಿಷಯದಲ್ಲಿ ರಾಜಕೀಯಗೊಳ್ಳಬಾರದು ಎಂದಿದ್ದಾರೆ. ಸಾರಿಗೆ ವ್ಯವಸ್ಥೆ ರೈತರು ಅಡ್ಡಗಟ್ಟಿಲ್ಲ. ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.  

Join Whatsapp