ಮಂಗಳೂರು | ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಪ್ರಯಾಣಿಸುತ್ತಿದ್ದ ಕಾರು-ಲಾರಿ ಢಿಕ್ಕಿ

Prasthutha|

ಮಂಗಳೂರು : ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತವೊಂದರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಗರದ ನಂತೂರು ಬಳಿ ಈ ಅಪಘಾತ ಸಂಭವಿಸಿದೆ.

- Advertisement -

ಮುಂಜಾನೆ 5:15ರ ಸುಮಾರಿಗೆ ದಯಾನಂದ ಕತ್ತಲಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಲಾರಿ ಮತ್ತು ಇವರ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ.

ದಯಾನಂದ ಕತ್ತಲಸಾರ್ ಅವರಿಗೆ ಸಣ್ಣ ಪಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Join Whatsapp