ಹೆದ್ದಾರಿ ತಡೆ | ಯಲಹಂಕದಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದ ಪ್ರತಿಭಟನಕಾರರು ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು : ನಗರದ ಹೊರವಲಯದ ಯಲಹಂಕದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತರನ್ನು ವಶಕ್ಕೆ ಪಡೆಯಲಾಗಿದೆ. ಕುರುಬೂರು ಶಾಂತಕುಮಾರ್ ಮತ್ತು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್ ನೇತೃತ್ವದಲ್ಲಿ ಯಲಹಂಕದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಹೆದ್ದಾರಿ ತಡೆಯಲು ಮುಂದಾದಾಗ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನೆ ತೆರವುಗೊಳಿಸುವಂತೆ ಪೊಲೀಸರ ಮನವಿಗೆ ಒಪ್ಪದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಸ್ ಗಳಲ್ಲಿ ಪ್ರತಿಭಟನಕಾರರನ್ನು ಕರೆದೊಯ್ಯಲಾಗಿದೆ.

Join Whatsapp