ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ : ನಟ ಸುದೀಪ್

Prasthutha|

ಬೆಂಗಳೂರು: ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದು ಕಾವೇರಿ ನದಿ ನೀರಿನ ವಿಚಾರವಾಗಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

- Advertisement -


ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೇ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ನ್ಯಾಯಾಧಿಕರಣ ಮತ್ತು ಕೇಂದ್ರ ಸರಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಕೊಡಬೇಕಿದೆ.

ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬರೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ.ಕೇಂದ್ರ ಸರಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ.

- Advertisement -

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.



Join Whatsapp