ಸೋಮಶೇಖರ್ ವಿಷ ಕುಡಿದಿದ್ರೆ ಪಕ್ಷ ಬಿಟ್ಟು ಹೋಗಲಿ: ಈಶ್ವರಪ್ಪ

Prasthutha|

ಬೆಂಗಳೂರು: ಸೋಮಶೇಖರ್ ವಿಷ ಕುಡಿದಿದ್ರೆ ಪಕ್ಷ ಬಿಟ್ಟು ಹೋಗಲಿ. ಯಾರೆಲ್ಲಾ ತಲೆಹರಟೆ ಮಾಡುತ್ತಾರೋ ಅವರನ್ನು ಯಾವಾಗ ತೆಗೆಯಬೇಕು ಎನ್ನುವುದು ಗೊತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

- Advertisement -


ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ನಂತರ ವಿಷ ಕೊಡುತ್ತಾರೆ ಎಂದು ಮೈಸೂರಿನಲ್ಲಿ ಶಾಸಕ ಸೋಮಶೇಖರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಸೋಮಶೇಖರ್ ಪಕ್ಷದಿಂದ ಹೊರ ಹೋಗಲಿ ಎಂದು ನಾನು ಹೇಳಿಯೇ ಇಲ್ಲ. ಅನೇಕರು ಜಾಮೂನು ತಿಂದಿದ್ದಾರೆ. ವಿಷ ಕುಡಿದವರು ಒಬ್ಬರಾದರೂ ಇದ್ದಾರಾ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದರು.



Join Whatsapp