ನಾಳೆ ಸಂಜೆ 4ಕ್ಕೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

Prasthutha|

ಬೆಂಗಳೂರು: ನಾಳೆ ಸಂಜೆ 4ಕ್ಕೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳಿಗೆ ಅನುಮೋದನೆ ದೊರೆಯಲಿದೆ ಎನ್ನಲಾಗಿದೆ.

- Advertisement -

ಬರ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ, ಕುಡಿಯುವ ನೀರಿನ ಸಮಸ್ಯೆ ಬಗ್ಗೆಯೂ ಚರ್ಚೆ ನಡೆದು, ಬರ ಪರಿಹಾರ, ಮತ್ತಷ್ಟು ಬರ ಪೀಡಿತ ತಾಲೂಕುಗಳನ್ನು ಘೋಷಣೆ ಕೂಡ ಮಾಡುವ ನಿರ್ಧಾರವನ್ನು ಕೈಗೊಳ್ಳೋ ಸಾಧ್ಯತೆಯೂ ಇದೆ.

ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ಸಿದ್ದರಾಮಯ್ಯ ಸರ್ಕಾರ, ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಜಾರಿಯ ಬಗ್ಗೆಯೂ ಚರ್ಚೆ ನಡೆಸೋ ಸಾಧ್ಯತೆ ಇದೆ. ಅಲ್ಲದೆ, ಅದಕ್ಕೆ ಬೇಕಿರುವ ಸೂಕ್ತ ಅನುದಾನಕ್ಕೂ ಒಪ್ಪಿಗೆ ಸೂಚಿಸಲಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ನಾಳಿನ ಸಚಿವ ಸಂಪುಟ ಸಭೆಯ ಬಗ್ಗೆ ನಾಡಿನ ಜನರಿಗೆ ನಿರೀಕ್ಷೆ, ಕುತೂಹಲ ಮೂಡಿದೆ.

- Advertisement -



Join Whatsapp