ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಈಶ್ವರ್ ಖಂಡ್ರೆ

Prasthutha|

ಬೀದರ್: ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಸಚಿವರ ನಿಯೋಗ ಕೇಂದ್ರಕ್ಕೆ ತೆರಳಿ ಹಣ ಬಿಡುಗಡೆ ಮಾಡುವಂತೆ ಕೇಳಿದೆ. ಆದರೆ, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿರುವುದು ಜನರಿಗೆ ಅರ್ಥವಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತದೆಯೋ, ಇಲ್ಲವೋ ಎಂಬುದನ್ನು ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ನಮ್ಮದು ರೈತರ ಪರ ಸರ್ಕಾರ. ರೈತರ ಹಿತದೃಷ್ಟಿಯಿಂದ ಆದಷ್ಟು ಶೀಘ್ರದಲ್ಲಿ‌ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.



Join Whatsapp