ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ: ಹೆಚ್ಚಿದ ಕಾತುರ

Prasthutha|

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಮುಕ್ತಾಯಗೊಂಡಿದ್ದು ಮತ ಎಣಿಕೆ ಪ್ರಕ್ರಿಯೆ ನಾಳೆ ನಡೆಯಲಿದೆ. ಇದರ ನಡುವೆ ಮಿಜೋರಾಂನಲ್ಲಿ ಮತ ಎಣಿಕೆ ಕಾರ್ಯ ಒಂದು ದಿನಕ್ಕೆ ಮುಂದೂಡಲಾಗಿದೆ.

- Advertisement -

ಡಿಸೆಂಬರ್ 3 ರ ಬದಲಾಗಿ ಡಿಸೆಂಬರ್ 4 ಕ್ಕೆ ಮತ ಎಣಿಕೆ ಕಾರ್ಯ ನಡೆಸುವುದಾಗಿ ಚುನಾವಣಾ ಆಯೋಗವು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದಲೇ ‘ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಲಿದೆ.



Join Whatsapp