ಯುಪಿಯಲ್ಲಿ ಬಿಎಸ್ಪಿ ನಾಯಕನ ಗುಂಡಿಕ್ಕಿ ಹತ್ಯೆ

Prasthutha|

- Advertisement -

ಉತ್ತರ ಪ್ರದೇಶದಲ್ಲಿ ಬಿಎಸ್ಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ಮೆಹ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯ 61 ವರ್ಷದ ಕಲಾಮುದ್ದೀನ್ ಖಾನ್ ಎಂದು ಗುರುತಿಸಲಾಗಿದೆ. ತನ್ನ ಮನೆಯ ಮುಂದೆ ಕುಳಿತಿರುವಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

ಘಟನೆಯಲ್ಲಿ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಗ್ರಾಮದ ಮಾಜಿ ಮುಖ್ಯಸ್ಥರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಹಳೇ ದ್ವೇಷವೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಖಾನ್ ವಿರುದ್ಧ ಎರಡು ಕೊಲೆಗಳು ಸೇರಿದಂತೆ ಆರು ಕೇಸುಗಳಿವೆ.

Join Whatsapp