ಕಾರುಗಳ ಮಧ್ಯೆ ಅಪಘಾತ: ಐವರು ಸಾವು

Prasthutha|

ನಾರಾಯಣಪೇಟೆ: ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲಾರೆಯಲ್ಲಿ ನಡೆದಿದೆ.

- Advertisement -

ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಎರಡು ಕಾರುಗಳಲ್ಲಿ ಒಂದು ಕರ್ನಾಟಕಕ್ಕೆ ಮತ್ತು ಒಂದು ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಅಪಘಾತದ ವೇಳೆ ಬಿಳಿ ಬಣ್ಣದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ಕಾರು ಹೈದರಾಬಾದ್ ನಿಂದ ರಾಯಚೂರು ಕಡೆಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.



Join Whatsapp