ಮನೆ ಮುಟ್ಟುಗೋಲಿಗೆ ಬಂದ ಬ್ಯಾಂಕ್ ಅಧಿಕಾರಿಗಳ ಮುಂದೆಯೇ ಮಹಿಳೆ ಆತ್ಮಹತ್ಯೆಗೆ ಶರಣು

Prasthutha|

ಪುತ್ತೂರು : ಮನೆ ಅಡವಿಟ್ಟು ಸಾಲ ಪಡೆದು ಸಾಲ ತೀರಿಸಲಾಗದೆ ಮನೆ ಮುಟ್ಟುಗೋಲಿಗೆ ಬಂದ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮುಂದೆಯೇ ಮನೆಯಲ್ಲಿ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಪುತ್ತೂರಿನಲ್ಲಿ ನಡೆದಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹಾರಾಡಿ ರೈಲ್ವೆ ಗೇಟ್ ಬಳಿಯ ನಿವಾಸಿ ರಘುವೀರ್ ಪ್ರಭು, ಪುತ್ತೂರಿನ ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಪಡೆದ ಸಾಲವನ್ನು ತೀರಿಸಲಾಗದೆ ಇದ್ದುದರಿಂದ ಮನೆ ಮುಟ್ಟುಗೋಲಿಗೆ ಬ್ಯಾಂಕ್ ಅಧಿಕಾರಿಗಳು ಆಗಮಿಸಿದ್ದರು.

ಇದರಿಂದಾಗಿ ಮರ್ಯಾದೆಗೆ ಅಂಜಿ ರಘುವೀರ್ ಪ್ರಭು ಅವರ ಪತ್ನಿ ಪ್ರಾರ್ಥನಾ ಪ್ರಭು ಅವರು ಮನೆಯಲ್ಲಿ ಲಾಕ್ ಮಾಡಿಕೊಂಡು ಬ್ಯಾಂಕ್ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Join Whatsapp