ಪುತ್ತೂರು: ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

Prasthutha|

ಪುತ್ತೂರು: ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ.

- Advertisement -


ಮುಂಡೂರು ಗ್ರಾಮದಲ್ಲಿ ಅಕ್ಷತೆ ಹಂಚುವ ಹೊಣೆ ಹೊತ್ತಿದ್ದ ಸಂತೋಷ್ ಮೇಲೆ ಸ್ಥಳೀಯ ನಿವಾಸಿ ಧನಂಜಯ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ ಆರೋಪಿಸಲಾಗಿದೆ.
ಗಲಾಟೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಸಂತೋಷ್ ಅವರು ಮನೆ ಮನೆಗೆ ಅಕ್ಷತೆ ಹಂಚುವುದಕ್ಕೆ ಒಂದು ಗುಂಪು ವಿರೋಧವ್ಯಕ್ತಪಡಿಸಿತ್ತು. ಇದೇ ದ್ವೇಷದಿಂದ ಸಂತೋಷ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Join Whatsapp