ಬೆಂಗಳೂರು ಇಂಟರ್ ನ್ಯಾಷನಲ್ ಓಪನ್ ಚೆಸ್ ಟೂರ್ನಿಗೆ ಚಾಲನೆ ನೀಡಿದ ಸಿದ್ದರಾಮಯ್ಯ

Prasthutha|

ಬೆಂಗಳೂರು ಇಂಟರ್ ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಮೆಂಟ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಶ್ವ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಚಾಲನೆ ನೀಡಿದ್ದಾರೆ.

- Advertisement -


ಈ ಸಂದರ್ಭದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ ಹಾಗೂ ಕರ್ನಾಟಕ ಚೆಸ್ ಅಸೋಷಿಯೇಷನ್ ನ ಪದಾಧಿಕಾರಿಗಳು ಹಾಜರಿದ್ದರು.

ಜನವರಿ 18 ರಿಂದ 26 ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಚೆಸ್ ಟೂರ್ನಿಯನ್ನು ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಇಂಟರ್ನ್ಯಾಷನಲ್ ಚೆಸ್ ಫೆಡರೇಶನ್ ಸಹಯೋಗದಲ್ಲಿ ಬೆಂಗಳೂರು ನಗರ ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸುತ್ತಿದೆ.



Join Whatsapp