ರಾಮಮಂದಿರ ನಿರ್ಮಾಣದಿಂದ ಭಾರತೀಯರ ಶತ ಶತಮಾನಗಳ ಕನಸು ನನಸು: ಕುಮಾರಸ್ವಾಮಿ

Prasthutha|

ಬೆಂಗಳೂರು: “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಂಡು, ಇಂದು ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿದೆ. ಈ ಮೂಲಕ ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗುತ್ತಿದೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ” ಎಂದು ತಿಳಿಸಿದ್ದಾರೆ.


“ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.



Join Whatsapp