ರಾಮನ ಮೂರ್ತಿಯ ಶೋಭಾಯಾತ್ರೆಯಲ್ಲಿ ಗಲಾಟೆ; ವಾಡಿಯಲ್ಲಿ 3 ದಿನ ನಿಷೇಧಾಜ್ಞೆ

Prasthutha|

ಕಲಬುರಗಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ರಾಮ ಉತ್ಸವ ಸಮಿತಿ ಆಯೋಜಿಸಿದ್ದ ರಾಮನ ಮೂರ್ತಿಯ ಶೋಭಾಯಾತ್ರೆಯ ವೇಳೆ ಸಂಭವಿಸಿದ ಗಲಾಟೆ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

- Advertisement -


ಸೋಮವಾರ ತಡರಾತ್ರಿಯಿಂದಲೇ ಪಟ್ಟಣದಲ್ಲಿ ನಿಷೇದಾಜ್ಞೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾವಲಿ ಅವರು ಈ ಆದೇಶ ಹೊರಡಿಸಿದ್ದಾರೆ.


ಗುಂಪೊಂದು ರೆಸ್ಟೋರೆಂಟ್ ಮುಚ್ಚದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.



Join Whatsapp