ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ: ಸಕ್ಕರೆ ಕಾರ್ಖಾನೆ ನೋಟಿಸ್ ಗೆ ಯತ್ನಾಳ್ ಕಿಡಿ

Prasthutha|

ಕಲಬುರಗಿ: ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.

- Advertisement -

ಈ ಸಂಬಂಧ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್ ಸರ್ಕಾರದ ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ.

‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ ಎಂದು ಯತ್ನಾಳ್ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.



Join Whatsapp