ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಯೆನ್ಮೂರ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Prasthutha|

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಯೆನ್ಮೂರ್ ನಲ್ಲಿ 75 ನೆ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

- Advertisement -

ದ್ವಜರೋಹಣ ಕಾರ್ಯಕ್ರಮ ವನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಅಬ್ದುಲ್ ಷರೀಫ್ ನೆರವೇರಿಸಿದರು.

ದ್ವಜರೋಹಣ ಕಾರ್ಯಕ್ರಮದಲ್ಲಿ ಎಡಮಂಗಲ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯ ಯೋಗಾನಂದ , ಮಾಯಿಲಪ್ಪ ಗೌಡ ಪಟ್ಟೆ,ಎಸ್.ಡಿ.ಎಂ.ಸಿ.ಸದಸ್ಯರು ,ಪೋಷಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ .ಅಧ್ಯಕ್ಷರಾದ ಶ್ರೀ ಅಬ್ದುಲ್ ಷರೀಫ್,ಹಿರಿಯ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾದ ಶ್ರೀ ಲೋಕನಾಥ ರೈ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಪ್ರಕಾಶ್ ರೈ, ಶ್ರೀ ಸೀತಾರಾಮ ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷರಾದ ಶ್ರೀ ರಘುನಾಥ ರೈ,ಎಡಮಂಗಲ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸವಿತಾ ಕಲ್ಲೇರಿ,ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಶ್ರೀಮತಿ ಸುನೀತ,ಮುಖ್ಯಶಿಕ್ಷಕ ರಾದ ಶ್ರೀಮತಿ ಭುವನೇಶ್ವರಿ ಉಪಸ್ಥಿತ ರಿದ್ದರು. ದತ್ತಿನಿಧಿ ವಿತರಣೆ,ಬಹುಮಾನ ವಿತರಣೆ ,ಮತ್ತು ವಿವಿಧ ಸಾಧನೆ ಮಾಡಿದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹ ನೀಡಲಾಯಿತು.ಎಸ್.ಡಿ.ಎಂ.ಸಿ ಅಧ್ಯಕ್ಷ ರಾದ ಶ್ರೀ ಅಬ್ದುಲ್ ಷರೀಫ್ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಸುನೀತ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಗಣ್ಯರ ಶುಭ ಹಾರೈಕೆಯೊಂದಿಗೆ ಕಾರ್ಯಕ್ರಮ ಕೊನೆ ಗೊಂಡಿತು .ಮುಖ್ಯ ಶಿಕ್ಷಕರಾದ ಶ್ರೀಮತಿ ಭುವನೇಶ್ವರಿ ಸರ್ವರನ್ನು ಸ್ವಾಗತಿಸಿದರು. ಸಹಶಿಕ್ಷಕಿ  ಶ್ರೀಮತಿ ಶಾಂತಮ್ಮ ಧನ್ಯವಾದವಿತ್ತರು.

- Advertisement -

ಅತಿಥಿ ಶಿಕ್ಷಕಿಯಾದ ಗುಲಾಬಿ ಮತ್ತು ಸೌಮ್ಯ ಸಹಕರಿಸಿದರು.ಸಹಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.

ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಸಿಹಿ ತಿಂಡಿ ಮತ್ತು ಊಟ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.



Join Whatsapp