ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡುವ ಖರ್ಗೆ ಪ್ರಯತ್ನ ವಿಫಲ: ಜೈರಾಮ್ ರಮೇಶ್

Prasthutha|

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆ ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಳ ಪ್ರಯತ್ನಪಟ್ಟರು. ಆದರೆ ಅವರು ತುಂಬಾ ಬ್ಯುಸಿಯಾಗಿದ್ದರು. ಹೀಗಾಗಿ ಯಾವುದೇ ಮಾತುಕತೆ ನಡೆದಿಲ್ಲ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -


‘ಹೊಸ ಸರ್ಕಾರ ರಚನೆಯಾಗಲಿದೆ ಎನ್ನುವ ಮಾಹಿತಿ ಬಿಹಾರದಿಂದ ಬರುತ್ತಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಹಿರಿಯ ವೀಕ್ಷಕರಾಗಿ ಕಾಂಗ್ರೆಸ್ ಕಳುಹಿಸುತ್ತಿದೆ. ಇಂದು ರಾತ್ರಿಯ ಒಳಗಾಗಿ ಬಘೇಲ್ ಅವರು ಪಟ್ನಾವನ್ನು ತಲುಪಲಿದ್ದಾರೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.



Join Whatsapp