ಭಾರತ್ ಜೋಡೋ ನ್ಯಾಯ ಯಾತ್ರೆ: ಬಂಗಾಳದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ

Prasthutha|

ಮಾಲ್ಡಾ: ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ರಾಹುಲ್ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಯಾರೋ ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಕಾರಿನ ಹಿಂಬದಿಯ ಗಾಜು ಜಖಂಗೊಂಡಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅವರು ಹೇಳಿದರು.


ಇನ್ನು ರಾಹುಲ್ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.

- Advertisement -



Join Whatsapp