ನಾವು ನಿಮ್ಮೊಂದಿಗೇ ಇದ್ದೆವು ಆದರೆ ನೀವೇ ನಮ್ಮನ್ನು ದೂರ ತಳ್ಳಿದ್ದೀರಿ: ಉದ್ಧವ್ ಠಾಕ್ರೆ

Prasthutha|

ಮುಂಬೈ: ನಾವು ನಿಮ್ಮೊಂದಿಗೇ ಇದ್ದೆವು ಆದರೆ ನೀವೇ ನಮ್ಮನ್ನು ದೂರ ತಳ್ಳಿದ್ದೀರಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ಬಗ್ಗೆ ಮಾತನಾಡಿದ್ದಾರೆ.

- Advertisement -


ಈಗಲೂ ಕೂಡ ನಮ್ಮ ಪಕ್ಷ ಎಂದಿಗೂ ಬಿಜೆಪಿಯ ಶತ್ರುವಲ್ಲ, 2019ರಲ್ಲಿ ಶಿವಸೇನೆ ನಿಮ್ಮೊಂದಿಗಿತ್ತು, ಹಾಗಾಗಿ ನೀವು ಪ್ರಧಾನಿಯಾದಿರಿ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿ ಮಾತನಾಡಿದ್ದಾರೆ. ಇದರ ಹೊರತಾಗಿಯೂ ಬಿಜೆಪಿ ಶಿವಸೇನೆಯನ್ನು ದೂರ ತಳ್ಳಿತ್ತು ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ಡಿಎಗೆ ಮರಳಿದ್ದು, ಉದ್ಧವ್ ಅವರ ಹೇಳಿಕೆಯಿಂದ ಹಲವು ಅರ್ಥಗಳನ್ನು ಕಲ್ಪಿಸಿಕೊಳ್ಳಲಾಗುತ್ತಿದೆ.

Join Whatsapp